ADVERTISEMENT

ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಸರ್ಕಾರ ಬೇಕು: ಮೋದಿಗೆ ಮೋಹನ್‌ದಾಸ್‌ ಪೈ ಮನವಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 19:31 IST
Last Updated 1 ಸೆಪ್ಟೆಂಬರ್ 2022, 19:31 IST
ಮೋಹನದಾಸ್ ಪೈ
ಮೋಹನದಾಸ್ ಪೈ   

ಬೆಂಗಳೂರು: ‘ರಾಜ್ಯದಲ್ಲೂ ಭ್ರಷ್ಟಾಚಾರ ಮುಕ್ತ, ಅಭಿವೃದ್ಧಿ ಪರ ಸರ್ಕಾರದ ಅಗತ್ಯ ಇದೆ ’ ಎಂದು ಉದ್ಯಮಿ ಟಿ.ವಿ. ಮೋಹನ್‌ದಾಸ್‌ ಪೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್‌ ಮೂಲಕ ಮನವಿ ಮಾಡಿದ್ದಾರೆ.

ಮಂಗಳೂರಿನಲ್ಲಿ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಸಲಿದ್ದಾರೆ ಎನ್ನುವ ವರದಿಯನ್ನು ಲಗತ್ತಿಸಿ ಅವರು ಟ್ವೀಟ್ ಮಾಡಿದ್ದಾರೆ.

‘ಭಾರತ ದೇಶಕ್ಕಾಗಿ ನೀವು ದೆಹಲಿಯಿಂದ ನಡೆಸುತ್ತಿರುವ ಭ್ರಷ್ಟಾಚಾರ ಮುಕ್ತ ಸರ್ಕಾರವು ಇಲ್ಲಿಯೂ ಬೇಕು. ಭ್ರಷ್ಟ ಅಧಿಕಾರಿಗಳನ್ನು ವಜಾಗೊಳಿಸಬೇಕು. ಭ್ರಷ್ಟ ರಾಜಕಾರಣಿಗಳಿಗೆ ಅವಕಾಶಗಳನ್ನು ಕಲ್ಪಿಸದೆ ಮೂಲೆಗುಂಪು ಮಾಡಬೇಕು. ಎಲ್ಲ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕು. ಭವಿಷ್ಯದಲ್ಲಿ ಉತ್ತಮ ಆಡಳಿತ ದೊರೆಯಲಿ’ ಎಂದು ಅವರು ಆಶಿಸಿದ್ದಾರೆ.

ADVERTISEMENT

ಈ ಟ್ವೀಟ್‌ ಅನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೂ ಲಗತ್ತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.