ಕೊಪ್ಪಳ: ‘ಕ್ಷೇತ್ರಕ್ಕಾಗಿ ಅಲೆದಾಡುತ್ತಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಎಲ್ಲೇ ಸ್ಪರ್ಧಿಸಿದರೂ ಸೋಲಿಸುತ್ತೇವೆ. ಕೋಲಾರದಲ್ಲಿ ಸ್ಪರ್ಧಿಸಿದರಂತೂ ಕಾಂಗ್ರೆಸ್ನವರೇ ಸೋಲಿಸುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
‘ಸಿದ್ದರಾಮಯ್ಯ ಅವರು ಬಾದಾಮಿ ಮತ್ತು ವರುಣಾದಲ್ಲಿ ಸ್ಪರ್ಧಿಸಲಿ. ನಾವು ಸೋಲಿಸುತ್ತೇವೆಯೊ ಇಲ್ಲವೊ ನೋಡಿ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ‘ಕಾಂಗ್ರೆಸ್ನವರಿಗೆ ತಾಕತ್ತು ಇದ್ದರೆ ರಾಹುಲ್ ಮತ್ತು ಪ್ರಿಯಾಂಕಾ, ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆಯಿಸದೇ ಚುನಾವಣೆ ಎದುರಿಸಲಿ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.