ADVERTISEMENT

ಯುವ‌ ಲಿಂಗಾಯತ ನಾಯಕರನ್ನು ಬೆಳೆಸುತ್ತೇವೆ: ಅರುಣ್ ಸಿಂಗ್

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2023, 9:07 IST
Last Updated 17 ಏಪ್ರಿಲ್ 2023, 9:07 IST
ಕಲಬುರಗಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದು ಪಾಟೀಲ ನಾಮಪತ್ರ ಸಲ್ಲಿಕೆ ಬಳಿಕ ಅರುಣ್ ಸಿಂಗ್, ಸಿದ್ದಾಜಿ ಪಾಟೀಲ, ಶಿವಕಾಂತ ಮಹಾಜನ್ ಹೊರಬಂದರು
ಕಲಬುರಗಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದು ಪಾಟೀಲ ನಾಮಪತ್ರ ಸಲ್ಲಿಕೆ ಬಳಿಕ ಅರುಣ್ ಸಿಂಗ್, ಸಿದ್ದಾಜಿ ಪಾಟೀಲ, ಶಿವಕಾಂತ ಮಹಾಜನ್ ಹೊರಬಂದರು   

ಕಲಬುರಗಿ: ಲಿಂಗಾಯತ ಸಮುದಾಯದ ‌ನಾಯಕರಾದ ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಇತರರು ಪಕ್ಷ ಬಿಟ್ಟು ಹೋಗಿದ್ದಕ್ಕೆ ಬೇಸರವಿಲ್ಲ. ಅವರ ಜಾಗದಲ್ಲಿ ಯುವ ಲಿಂಗಾಯತ ನಾಯಕರಿಗೆ ಟಿಕೆಟ್ ನೀಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ನಗರದಲ್ಲಿ ಸೋಮವಾರ ಕಲಬುರಗಿ ಉತ್ತರ ‌ಕ್ಷೇತ್ರದ ಅಭ್ಯರ್ಥಿ ಚಂದು ಪಾಟೀಲ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಇಬ್ಬರೂ ನಾಯಕರು ಪಕ್ಷ ಬಿಟ್ಟು ಹೋಗಿದ್ದರಿಂದ ಪಕ್ಷದ ಓಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.