ADVERTISEMENT

ಸಾರಿಗೆ ನೌಕರರ ವೇತನ ಶೇ10 ರಷ್ಟು ಹೆಚ್ಚಿಸಲು ಕ್ರಮ: ಸಚಿವ ಬಿ.ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 12:52 IST
Last Updated 10 ಮಾರ್ಚ್ 2023, 12:52 IST
   

ರಾಯಚೂರು: ಆರ್ಥಿಕ ಇಲಾಖೆ ಮತ್ತು ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ಸಾರಿಗೆ ನೌಕರರ ವೇತನವನ್ನು ಶೇ 10 ರಷ್ಟು ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನೌಕರರ ಸಂಘದೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲೆ ಸಿಹಿ ಸುದ್ದಿ ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಸಜೀವವಾಗಿ ದಹನವಾಗಿರುವ ಬಸ್‌ ಚಾಲಕನ ಕುಟುಂಬಕ್ಕೆ ತಕ್ಷಣ ₹5 ಲಕ್ಷ ಪರಿಹಾರ ನೀಡಬೇಕು, ವಿಮಾ ಪರಿಹಾರ

ADVERTISEMENT

ಒದಗಿಸಬೇಕು ಹಾಗೂ ಕುಟುಂಬದವರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಘಟನೆ ನಡೆಯುವುದಕ್ಕೆ ಕಾರಣ ಪತ್ತೆ ಹಚ್ಚಲು ತಿಳಿಸಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.