ADVERTISEMENT

ಬಿಜೆಪಿ ರಾಜ್ಯ ಉಸ್ತುವಾರಿಗೆ ಸಂಭ್ರಮದ ಸ್ವಾಗತ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 16:28 IST
Last Updated 4 ಡಿಸೆಂಬರ್ 2020, 16:28 IST
ಬೆಳಗಾವಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ
ಬೆಳಗಾವಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ   
""

ಬೆಳಗಾವಿ: ಬಿಜೆಪಿ ರಾಜ್ಯ ಉಸ್ತುವಾರಿಯಾದ ನಂತರ ಇದೇ ಮೊದಲ ಬಾರಿಗೆ ಶುಕ್ರವಾರ ನಗರಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರನ್ನು ಕಾರ್ಯಕರ್ತರು ಸಂಭ್ರಮದಿಂದ ಬರಮಾಡಿಕೊಂಡರು.

ಗೋವಾಗೆ ವಿಮಾನದಲ್ಲಿ ಬಂದಿಳಿದ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಶಾಸಕ ಅನಿಲ್ ಬೆನಕೆ ಸ್ವಾಗತಿಸಿಕೊಂಡರು. ಸಂಜೆ ನಗರ ಪ್ರವೇಶಿಸಿದ ಅವರನ್ನು ಪಕ್ಷದ ಕಾರ್ಯಕರ್ತರು ದ್ವಿಚಕ್ರ ವಾಹನಗಳ ಮೆರವಣಿಗೆ ಮೂಲಕ ಸಂಭ್ರಮದಿಂದ ಬರ ಮಾಡಿಕೊಂಡರು.

ಬಳಿಕ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಅವರು ಭಾಗಿಯಾಗಿದ್ದರು. ಡಿ.5ರಂದು ನಡೆಯಲಿರುವ ರಾಜ್ಯ ಘಟಕದ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ADVERTISEMENT

ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ನಗರದಾದ್ಯಂತ ‌ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.