ADVERTISEMENT

ಲಿಂಬಾವಳಿಗೆ ಪ.ಬಂಗಾಳ ಚುನಾವಣಾ ಜವಾಬ್ದಾರಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 20:50 IST
Last Updated 5 ಮಾರ್ಚ್ 2021, 20:50 IST
   

ಬೆಂಗಳೂರು: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಉದ್ದೇಶದಿಂದ ಹಲವು ನಾಯಕರನ್ನು ತೊಡಗಿಸಿಕೊಳ್ಳುತ್ತಿರುವ ಬಿಜೆಪಿ ವರಿಷ್ಠರು, ರಾಜ್ಯದ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರನ್ನೂ ಕರೆಯಿಸಿಕೊಂಡಿದೆ.

ಕಲಬುರ್ಗಿ ಪ್ರವಾಸದಲ್ಲಿರುವ ಸಚಿವ ಅರವಿಂದ ಲಿಂಬಾವಳಿ ಅವರಿಗೆ ದೆಹಲಿಯಿಂದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರ ತುರ್ತು ಕರೆ ಬಂದ ಕಾರಣ ತಮ್ಮ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ತೆರಳಿದರು.

ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೂ ಈಗಾಗಲೇ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ADVERTISEMENT

ತೆಲಂಗಾಣ ಸೇರಿ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿರುವ ಅರವಿಂದ್‌ ಅವರನ್ನು ಪಶ್ಚಿಮಬಂಗಾಳದಲ್ಲಿ ತೊಡಗಿಸಿಕೊಳ್ಳುವಂತೆ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.