ADVERTISEMENT

ಅನುಪಯುಕ್ತ ಜಾನುವಾರುಗಳನ್ನು ರೈತರು ಏನು ಮಾಡಬೇಕು? ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2020, 13:54 IST
Last Updated 28 ಡಿಸೆಂಬರ್ 2020, 13:54 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: ವಯಸ್ಸಾದ ಹಸು, ಗಂಡು ಕರುಗಳು ಹೀಗೆ ಅನುಪಯುಕ್ತ ಜಾನುವಾರುಗಳನ್ನು ರೈತರು ಏನು ಮಾಡಬೇಕು? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ಧರಾಮಯ್ಯ ಅವರು ಅನುಪಯುಕ್ತ ಜಾನುವಾರುಗಳನ್ನು ರೈತರು ಏನು ಮಾಡಬೇಕು? ಇವುಗಳನ್ನು ಸಾಕಲು ರೈತರಿಗೆ ₹ 100 ಬೇಕು. ಈ ಹಣವನ್ನು ಬಿಜೆಪಿಯವರು ಕೊಡುತ್ತಾರೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನು ಪ್ರಶ್ನೆ ಮಾಡಿದರೆ ನನ್ನ ಗೋಮಾತೆಯ ವಿರೋಧಿ ಎಂದು ಕರೆಯುತ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.