ADVERTISEMENT

ಕೈ ಯಾತ್ರೆ ಸುಲ್ತಾನ್ ಬತ್ತೇರಿ ಮೂಲಕ ಬಂದಿದ್ದು ಏಕೆ? ಇಲ್ಲಿದೆ ಬಿಜೆಪಿ ವಿವರಣೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 5:15 IST
Last Updated 30 ಸೆಪ್ಟೆಂಬರ್ 2022, 5:15 IST
ಕೇರಳದಲ್ಲಿ ಕಾಂಗ್ರೆಸ್‌ನ ಭಾರತ ಜೋಡಿ ಯಾತ್ರೆ
ಕೇರಳದಲ್ಲಿ ಕಾಂಗ್ರೆಸ್‌ನ ಭಾರತ ಜೋಡಿ ಯಾತ್ರೆ    

ಬೆಂಗಳೂರು: ಕಾಂಗ್ರೆಸ್‌ನ ಮಹತ್ವಾಕಾಂಕ್ಷೆಯ ‘ಭಾರತ ಜೋಡಿಸಿ ಯಾತ್ರೆ (ಭಾರತ್‌ ಜೋಡೊ ಯಾತ್ರೆ)‘ಯು ತಮಿಳುನಾಡು, ಕೇರಳ ಸಂಚಾರ ಮುಗಿಸಿ ಇಂದು (ಸೆ. 30) ರಾಜ್ಯ ಪ್ರವೇಶ ಮಾಡಿದೆ.

ಕೇರಳದ ಸುಲ್ತಾನ್‌ ಬತ್ತೇರಿ ಮಾರ್ಗವಾಗಿ ರಾಜ್ಯ ಪ್ರವೇಶಿಸಿರುವ ಯಾತ್ರೆಯ ಹಿಂದೆ ಬೇರೆಯದ್ದೇ ಕಾರಣವಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಸಂಬಂಧ ರಾಜ್ಯ ಬಿಜೆಪಿ ಘಟಕವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೊ ವಿವರಣೆಯನ್ನೂ ನೀಡಿದೆ.

ADVERTISEMENT

‘ಟಿಪ್ಪುವಿನ ಮತಾಂಧತೆಗೆ ಹಿಂದೂಗಳ ರಕ್ತ ಹರಿದಿರುವ ನೆಲ ಸುಲ್ತಾನ್ ಬತ್ತೇರಿ. ಇಲ್ಲಿಂದಲೇ ರಾಹುಲ್ ಯಾತ್ರೆ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವುದು ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನಡಿ’ ಎಂದು ಆ ವಿಡಿಯೊಗೆ ವಿವರಣೆಯೊಂದನ್ನು ಬಿಜೆಪಿ ನೀಡಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ನಾಯಕರು ಸುಮಾರು 511 ಕಿ.ಮೀಯಷ್ಟು ನಡೆಯಲಿದ್ದಾರೆ. ಒಟ್ಟು 21 ದಿನಗಳ ಕಾಲ ರಾಜ್ಯದಲ್ಲಿ ಯಾತ್ರೆ ಇರಲಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.