ಬೆಂಗಳೂರು: ರಾಜ್ಯದಲ್ಲಿ ಸಿ.ಡಿ ವಿಚಾರ ಜೋರಾಗಿಯೇ ಚರ್ಚೆಯಾಗುತ್ತಿದ್ದು, ದೂರು ದಾಖಲಾಗಿದೆ, FIR ಹಾಕಲಾಗಿದೆ, ಇನ್ನೂ ಏಕೆ ಅತ್ಯಾಚಾರವೆಸಗಿದ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಿಲ್ಲ? ಸರ್ಕಾರಕ್ಕೆ ಭಯವೇ? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಮಾಜಿ ಸಚಿವರೆಂದ ಮಾತ್ರಕ್ಕೆ ಕಾನೂನಿಗೆ ಅತೀತರೇ? ಬೊಮ್ಮಾಯಿಅವರೇ ಈ ರಕ್ಷಣಾತ್ಮಕ ಆಟ ಸಾಕು, ಕೂಡಲೇ ಬಂಧಿಸಿ, ರಾಜ್ಯದ ಮಾನ ಉಳಿಸಿ. ಲಂಚ, ಮಂಚದ ಸರ್ಕಾರದಿಂದ ಈಗಾಗಲೇ ಕರ್ನಾಟಕದ ಮರ್ಯಾದೆ ದೇಶದೆದುರು ಹರಾಜಾಗಿದೆ ಎಂದು ದೂರಿದೆ.
ದೂರು ದಾಖಲಾದರೂ, ಎಫ್ಐಆರ್ ಹಾಕಿದ್ದರೂ ಅತ್ಯಾಚಾರ ಮಾಡಿದ ಪ್ರಭಾವಿ ವ್ಯಕ್ತಿಯನ್ನು ರಕ್ಷಿಸಲಾಗುತ್ತಿದೆ ಎಂಬ ಕಳಂಕ ಕರ್ನಾಟಕಕ್ಕೆ ಬೇಡ. ಅದೇನಿದ್ದರೂ ಯುಪಿಯ ಯೋಗಿ ಆಡಳಿತಕ್ಕಿರಲಿ. ಸರ್ಕಾರ ಕೂಡಲೇ ಅತ್ಯಾಚಾರಿಯನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.