ADVERTISEMENT

ಕಾಡಿಗೆ ಬೆಂಕಿ: ತಮಿಳುನಾಡಿನ ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 17 ಜನವರಿ 2019, 17:31 IST
Last Updated 17 ಜನವರಿ 2019, 17:31 IST

ಹನೂರು: ಕಾವೇರಿ ವನ್ಯಧಾಮದಲ್ಲಿ ಅರಣ್ಯಕ್ಕೆ ಬೆಂಕಿ ಹಾಕುತ್ತಿದ್ದ ತಮಿಳುನಾಡಿನ ಬಿಳಿಗುಂಡ್ಲು ಗ್ರಾಮದ ನಿವಾಸಿ ರಾಜು ಎಂಬಾತನನ್ನು ಅರಣ್ಯಾಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಕೌದಳ್ಳಿ ವನ್ಯಜೀವಿ ವಲಯದಲ್ಲಿ ಎರಡು ದಿನಗಳಿಂದ ನಿರಂತರವಾಗಿ ಕಾಣಿಸಿಕೊಂಡಿದ್ದ ಬೆಂಕಿಯು ಅರಣ್ಯಾಧಿಕಾರಿಗಳ ನಿದ್ದೆಗೆಡಿಸಿತ್ತು. ಬೆಂಕಿ ನಂದಿಸುವುದರ ಜತೆಗೆ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.

‘ಎರಡು ದಿನಗಳಿಂದ ನಿರಂತರವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಇದು ಯಾರದೋ ಕೃತ್ಯ ಇರಬಹುದು ಎಂಬ ಅನುಮಾನ ಬಂದಿತ್ತು. ಹಾಗಾಗಿ, ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಪರಿಶೀಲನೆ ನಡೆಸಲು ಸೂಚಿಸಲಾಗಿತ್ತು. ರಾಜು ತನ್ನ ಸ್ನೇಹಿತರೊಡಗೂಡಿ ವಲಯದ ಏಳು ಕಡೆ ಬೆಂಕಿ ಇಟ್ಟಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ರಮೇಶ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.