ADVERTISEMENT

ಎಸ್‌.ಸಿ, ಎಸ್‌.ಟಿ, ಮುಸ್ಲಿಮರನ್ನು ಬಿಜೆಪಿಯತ್ತ ಕರೆತರುವೆ: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 19:45 IST
Last Updated 10 ಡಿಸೆಂಬರ್ 2019, 19:45 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ    

ಬೆಳಗಾವಿ: ‘ಲಿಂಗಾಯತರು ಹಾಗೂ ಇತರೆ ಹಿಂದುಳಿದ ಜನಾಂಗದ ಮತದಾರರು ಬಿಜೆಪಿಯತ್ತ ವಾಲಿರುವುದು ಈ ಉಪಚುನಾವಣೆಯಿಂದ ಸಾಬೀತಾಗಿದೆ. ಇನ್ನುಳಿದಿರುವ ಎಸ್‌.ಸಿ, ಎಸ್‌.ಟಿ ಹಾಗೂ ಮುಸ್ಲಿಮರನ್ನು ಪಕ್ಷದತ್ತ ಕರೆತರುವುದು ನನ್ನ ಜವಾಬ್ದಾರಿ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್‌ಗೆ ಮೋಸ ಹೋಗಬೇಡಿ ಎಂದು ಈ ಸಮಾಜದವರಿಗೆ ತಿಳಿಹೇಳುವ ಕೆಲಸ ಮಾಡುವೆ. ಮುಂದಿನ ಚುನಾವಣೆಯಲ್ಲಿ ಇವರನ್ನೆಲ್ಲ ಬಿಜೆಪಿ ಕಡೆ ಕರೆತರುವೆ’ ಎಂದು ನುಡಿದರು.

‘ಸಚಿವರನ್ನಾಗಿ ಮಾಡುವ ತೀರ್ಮಾನ ಹೈಕಮಾಂಡ್‌ ಹಾಗೂ ಮುಖ್ಯಮಂತ್ರಿ ಅವರಿಗೆ ಬಿಟ್ಟಿದ್ದು. ಅವರು ಯಾವ ಖಾತೆ ಕೊಟ್ಟರೂ ನಿಭಾಯಿಸುವೆ. ಜಲಸಂಪನ್ಮೂಲ ಖಾತೆ ದೊಡ್ಡದು. ಅದು ಸಿಕ್ಕರೆ ನನ್ನ ಪುಣ್ಯ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.