ಕೆ.ಆರ್.ಪೇಟೆ: ‘ಕೆಆರ್ಎಸ್ ಜಲಾಶಯದ ನೀರನ್ನು ಬಳಸಿಕೊಳ್ಳಲು ರೈತರಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ನೀರನ್ನು ಬೆಂಗಳೂರು ನಗರಕ್ಕೆ ಸರಬರಾಜು ಮಾಡಲು ಬಿಡುವುದಿಲ್ಲ’ ಎಂದು ರೈತ ಸಂಘದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಮುದುಗೆರೆ ರಾಜೇಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಅಣೆಕಟ್ಟೆ ಯಲ್ಲಿರುವ ನೀರನ್ನು ಬಳಸಿಕೊಳ್ಳುವ ಸಂಪೂರ್ಣ ಹಕ್ಕು ನಮಗಿದೆ. ಇದಕ್ಕೆ ಅವಕಾಶ ನೀಡದಿದ್ದರೆ, ತೊರೆ ಕಾಡನೂರು ನೀರು ಸಂಗ್ರಹಣಾ ಕೇಂದ್ರಕ್ಕೆ ಮುತ್ತಿಗೆ ಹಾಕುತ್ತೇವೆ. ನೀರು ತಡೆಯುವ ಜೊತೆಗೆ ರಾಜ್ಯ ಹೆದ್ದಾರಿ ಬಂದ್ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.