ADVERTISEMENT

ಜೆಡಿಎಸ್‌ ಆಹ್ವಾನ ನಿಜ: ಆದರೂ, ದೇವರಾಣೆ ಕಾಂಗ್ರೆಸ್ ಬಿಡುವುದಿಲ್ಲ ಎಂದ ಬಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 21 ಮೇ 2022, 10:38 IST
Last Updated 21 ಮೇ 2022, 10:38 IST
ಎಚ್‌.ಸಿ ಬಾಲಕೃಷ್ಣ
ಎಚ್‌.ಸಿ ಬಾಲಕೃಷ್ಣ    

ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಹಾಗೂ‌ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರ ನಡುವಿನ ಮುನಿಸು ಸ್ಪೋಟಗೊಂಡಿದೆ. ‘ಈ ಬಾರಿ ಕ್ಷೇತ್ರದಲ್ಲಿ ರೇವಣ್ಣರಿಗೇ ಟಿಕೆಟ್ ಕೊಡಿ’ ಎಂದು ಬಾಲಕೃಷ್ಣ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ಕಾಂಗ್ರೆಸ್‌ ತೊರೆಯುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದು, ಇದನ್ನು ಸ್ವತಃ ಅವರೇ ನಿರಾಕರಿಸಿದ್ದಾರೆ.

ಈ ಮಧ್ಯೆ ಬಾಲಕೃಷ್ಣ ಅವರಿಗೆ ಜೆಡಿಎಸ್‌–ಬಿಜೆಪಿಯಿಂದಲೂ ಆಹ್ವಾನ ಬಂದಿದೆ ಎಂದೆಲ್ಲ ವದಂತಿಗಳು ಹಬ್ಬಿವೆ. ಆದರೆ ಇದನ್ನೆಲ್ಲ ಅವರು ತಳ್ಳಿಹಾಕಿದ್ದು, ‘ ದೇವರಾಣೆಗೂ ನಾನು ಕಾಂಗ್ರೆಸ್ ಬಿಡುವುದಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ ಜೆಡಿಎಸ್‌ನಿಂದ ಆಹ್ವಾನ ಬಂದಿದ್ದು ನಿಜ. ಆದರೆ ಅದನ್ನು ನಿರಾಕರಿಸಿದ್ದೇನೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷ ಬದಲಿಸುತ್ತಲೇ ಇದ್ದರೆ ಜನಪ್ರತಿನಿಧಿಗಳಿಗೆ ಬೆಲೆ ಇರುವುದಿಲ್ಲ. ನಾನು ಕಾಂಗ್ರೆಸ್‌ನಲ್ಲೇ ಇದ್ದು, ರೇವಣ್ಣರನ್ನು ಬೆಂಬಲಿಸಲು ಸಿದ್ಧನಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.