ಹುಬ್ಬಳ್ಳಿ: ಬಿಜೆಪಿ ಮಾದರಿಯಲ್ಲಿ ಜೆಡಿಎಸ್ ಕಟ್ಟುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಸ್ತಿತ್ವವೇ ಇಲ್ಲದಂತಹ ರಾಜ್ಯಗಳಲ್ಲಿ ಬಿಜೆಪಿ ಹೇಗೆ ಬೆಳೆಯಿತು. ಪಕ್ಷವನ್ನು ಹೇಗೆ ಕಟ್ಟಲಾಯಿತು ಎನ್ನುವುದರ ಬಗ್ಗೆ ಹಲವಾರು ಪುಸ್ತಕಗಳು ಬಂದಿವೆ. ಎರಡು ವರ್ಷದ ಕೋವಿಡ್ ಸಂದರ್ಭದಲ್ಲಿ ಈ ಪುಸ್ತಕಗಳನ್ನೆಲ್ಲ ಓದಿದ್ದೇನೆ. ಅದೇ ಮಾದರಿಯಲ್ಲಿ ಜೆಡಿಎಸ್ ಕಟ್ಟುವೆ. ಪಕ್ಷ ಸಂಘಟಿಸುವಲ್ಲಿ ಮಾತ್ರ ಬಿಜೆಪಿ ಮಾದರಿ, ಬೇರೆ ವಿಷಯದಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷ ಇಟ್ಟುಕೊಂಡು ಏನು ಮಾಡಲಿ? ರಾಜ್ಯ ಸಭೆ ಚುನಾವಣೆಯಲ್ಲಿ ಗೆದ್ದರೆ ಪಕ್ಷಕ್ಕೆ ಶಕ್ತಿ ಬರುತ್ತದೆ. ಗೆಲ್ಲದಿದ್ದರೆ ನಷ್ಟವೇನಿಲ್ಲ. ನನ್ನ ಗುರಿ ರಾಜ್ಯಸಭೆ ಅಲ್ಲ. 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ. ಈ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದ್ದೇನೆ. ಒಂದು ಬಾರಿ ಸಂಪೂರ್ಣ ಬಹುಮತ ನೀಡಿ ಎಂದು ಜನರಲ್ಲಿ ಕೇಳಿಕೊಳ್ಳುವೆ. ಅವರು ನೀಡದಿದ್ದರೆ ಪಕ್ಷವನ್ನು ವಿಸರ್ಜಿಸುವೆ. ಜನರೇ ಮತ ನೀಡದಿದ್ದಾಗ ಪಕ್ಷ ಇಟ್ಟುಕೊಂಡು ಏನು ಮಾಡಲಿ ಎಂದು ಹತಾಶರಾಗಿ ನುಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.