ADVERTISEMENT

ಸೋಮವಾರ ಬಹುಮತ ಗೆಲ್ಲುತ್ತೇವೆ, ನಾನು ಸಚಿವ ಸ್ಥಾನ ಆಕಾಂಕ್ಷಿಯಲ್ಲ: ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 27 ಜುಲೈ 2019, 4:25 IST
Last Updated 27 ಜುಲೈ 2019, 4:25 IST
   

ಬೆಂಗಳೂರು:ಬಿಜೆಪಿ ನೂತನ ಸರ್ಕಾರ ಸೋಮವಾರ ಬಹುಮತದಲ್ಲಿ ಗೆಲ್ಲಲಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಬೆಳಿಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, ನೂತನ ಸರ್ಕಾರದ ಸಚಿವ ಸಂಪುಟ ರಚನೆ ಆಗಲಿದ್ದು, ನಾನು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿದರು.

ಬಿಜೆಪಿ ಸರ್ಕಾರಕ್ಕೆ ಜೆಡಿಎಸ್‌ ಬಾಹ್ಯ ಬೆಂಬಲ ಕೊಡುತ್ತದೆಯಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಆ ವಿಚಾರ ನನಗೆ ಗೊತ್ತಿಲ್ಲ. ಅದು ಆ ಪಕ್ಷದ ವರಿಷ್ಠರಿಗೆ ಬಿಟ್ಟದ್ದು ಎಂದಷ್ಟೇ ಹೇಳಿದರು.

ADVERTISEMENT

14 ತಿಂಗಳು ಆಡಳಿತ ನಡೆಸಿದ ಮೈತ್ತಿ ಸರ್ಕಾರ ವಿಶ್ವಾಸ ಕಳೆದುಕೊಂಡು ಬಿದ್ದುಹೋದ ಬಳಿಕ, ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದ್ದಾರೆ.

ಸೋಮವಾರ ವಿಶ್ವಾಸಮತ ಯಾಚಿಸಿ, ಸಂಪುಟ ರಚನೆಯ ಉಮೇದಿನಲ್ಲಿ ಬಿಜೆಪಿ ನಾಯಕರಿದ್ದಾರೆ.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.