ಕಲಬುರ್ಗಿ: ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ಬುಧವಾರ ರಾತ್ರಿ ಆಯೋಜಿಸಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರ ಪತ್ನಿ ಜಯಶ್ರೀ ಅವರು ಭಾಷಣದ ಕೊನೆಯಲ್ಲಿ ‘ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದ್ದಾರೆ.
ಈ ಮಾತು ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಹುತೇಕರು ಮರಾಠಿ ಬಲ್ಲವರಿದ್ದರು. ಹೀಗಾಗಿ ಅವರ ಒತ್ತಾಯದ ಮೇರೆಗೆ ಮರಾಠಿಯಲ್ಲಿ ಮಾತನಾಡಿದೆ. ಕೊನೆಯಲ್ಲಿ ಜೈ ಮಹಾರಾಷ್ಟ್ರ ಎಂದು ಹೇಳಿದ್ದು ನಿಜ. ಆದರೆ, ನಾನು ಕರ್ನಾಟಕದಲ್ಲಿದ್ದೇನೆ. ನನ್ನ ಮಾತಿಗೆ ಕ್ಷಮೆ ಕೇಳುವೆ’ ಎಂದು ವಿವಾದ ತಿಳಿಯಾಗಿಸುವ ಪ್ರಯತ್ನ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.