ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಕಾಮಗಾರಿ ಮೊತ್ತವನ್ನು ₹1 ಕೋಟಿಗೆ ಹೆಚ್ಚಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ 24.10 ಮೀಸಲಾತಿಯಲ್ಲಿ ಕಾಮಗಾರಿ ಮೊತ್ತ ₹50 ಲಕ್ಷವಿತ್ತು. ಸಾರ್ವಜನಿಕ ಸಂಗ್ರಹಣೆಗಳಲ್ಲಿನ ಪಾರದರ್ಶಕತೆ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಇದನ್ನು ₹1 ಕೋಟಿಗೆ ಹೆಚ್ಚಿಸಲಾಗಿದೆ. ಶೇ 17.15ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ 6.95ರಷ್ಟು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ನಿಗದಿಪಡಿಸಲಾಗಿದೆ.
ಇದರಂತೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಪೌರಾಡಳಿತ ನಿರ್ದೇಶನಾಲಯ ಅ.19ರಂದು ಸುತ್ತೋಲೆ ಹೊರಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.