ADVERTISEMENT

ಮೂವರು ವ್ಯಕ್ತಿಗಳು, ಮೂರು ಸಂಸ್ಥೆಗಳಿಗೆ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 7:21 IST
Last Updated 5 ಜೂನ್ 2019, 7:21 IST

ಬೆಂಗಳೂರು:ವಿಶ್ವ ಪರಿಸರ ದಿನ ಪ್ರಯುಕ್ತ ಬುಧವಾರ ಇಲ್ಲಿ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಸ್‌ ಎಲ್.ಧರ್ಮೇಗೌಡ ಪ್ರಶಸ್ತಿ ಪ್ರದಾನ ಮಾಡಿದರು.

ವ್ಯಕ್ತಿ ವಿಭಾಗದಲ್ಲಿ ಕೆಂಪಸಿದ್ದೇ ಗೌಡ, ಡಾ.ತಿಪ್ಪೇಕಾಳಿ ರಂಗನಾಥ್, ಬಸವರಾಜ್ ಬಸಪ್ಪ ಇಂದೂರ ಹಾಗೂ ಸಂಘ ಸಂಸ್ಥೆ ವಿಭಾಗದಲ್ಲಿ ಸಹಜ ಸಮೃದ್ಧ, ಉತ್ತರ ಕನ್ಬಡ ನಗರಾಭಿವೃದ್ಧಿ ಕೋಶ, ಕೊಪ್ಪಳ ನಗರಸಭೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ADVERTISEMENT

ಸಂಸದ ತೇಜಸ್ವಿ ಸೂರ್ಯ, ಶಾಸಕ ಡಾ.ಅಶ್ವತ್ಥನಾರಾಯಣ, ವಿಧಾನ ಪರಿಸತ್ ಸದಸ್ಯ ಶರವಣ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಜಯರಾಂ, ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಅರವಿಂದ ವರ್ಮಾ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.