ಮೈಸೂರು: ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರಿಗೆ ಶುಕ್ರವಾರ ಸಂಜೆ ತೀವ್ರ ಹೃದಯಾಘಾತವಾಗಿದ್ದು, ಇಲ್ಲಿನ ಸುಯೋಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ ಕುವೆಂಪುನಗರದ ತಮ್ಮ ನಿವಾಸದ ಬಳಿ ವಾಯುವಿಹಾರ ಮಾಡುತ್ತಿದ್ದಾಗ ಪ್ರೊ.ಭಗವಾನ್ ಕುಸಿದುಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ತಾತ್ಕಾಲಿಕ ‘ಪೇಸ್ ಮೇಕರ್’ ಸಾಧನವನ್ನು ಅಳವಡಿಸಿದ್ದಾರೆ.
‘ಗೋಲ್ಡನ್ ಅವರ್’ (ಚಿಕಿತ್ಸೆಗೆ ಸ್ಪಂದಿಸುವ ಹಂತ) ನಲ್ಲಿ ಭಗವಾನ್ ಅವರನ್ನು ಕರೆತಂದ ಕಾರಣದಿಂದ ಬದುಕಿಸಲು ಸಾಧ್ಯವಾಯಿತು. ಹೃದಯ ಬಡಿತ ತೀರಾ ಕ್ಷೀಣವಾಗಿತ್ತು. ಅವರ ಆರೋಗ್ಯವನ್ನು ಸ್ಥಿರಗೊಳಿಸಿ ಶಸ್ತ್ರಚಿಕಿತ್ಸೆ ನಡೆಸಿದೆವು. ತೀವ್ರನಿಗಾ ಘಟಕದಲ್ಲಿ ಇರಿಸಲಾಗಿದೆ’ ಎಂದು ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.