ADVERTISEMENT

‘ಯಡಿಯೂರಪ್ಪ ಜೈಲಿಗೆ ಹೋದಾಗ ಸಂಭ್ರಮಿಸಿದ್ದ ಕಾಂಗ್ರೆಸ್‌’

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 7:04 IST
Last Updated 5 ಸೆಪ್ಟೆಂಬರ್ 2019, 7:04 IST
   

ಬೆಂಗಳೂರು: ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ಜೈಲಿಗೆ ಹೋದಾಗ ಸಂಭ್ರಮಿಸಿದ್ದ ಕಾಂಗ್ರೆಸ್‌ ಡಿ.ಕೆ.ಶಿವಕುಮಾರ್‌ ಬಂಧನಕ್ಕೆ, ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದರು.

‘ಶಿವಕುಮಾರ್‌ ಬಂಧನಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಅವರು ಜೈಲಿಗೆ ಹೋಗಲಿ ಎಂದು ನಾವು ಎಂದೂ ಬಯಸಿಲ್ಲ. ಕಾನೂನಿನ ಪ್ರಕಾರ ತನಿಖೆ ನಡೆಯುತ್ತದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರಾಜಭವನ ಕಾಂಗ್ರೆಸ್‌ ಭವನದಂತಾಗಿತ್ತು. ತಮಗೆ ಬೇಕಾದಂತೆ ಆಟವಾಡಿದ್ದರು’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT