ADVERTISEMENT

ತೆರಿಗೆ ಹಣ ಪುತ್ರನ ಚುನಾವಣೆಗೆ ಬಳಕೆ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 19:14 IST
Last Updated 14 ಏಪ್ರಿಲ್ 2019, 19:14 IST
   

ಚಾಮರಾಜನಗರ: ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಅವರು ಜನರ ತೆರಿಗೆ ₹ 150 ಕೋಟಿ ಲೂಟಿ ಮಾಡಿ ತಮ್ಮ ಪುತ್ರ ನಿಖಿಲ್ ಗೆಲುವಿಗಾಗಿ ಬಳಕೆ ಮಾಡುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಇಲ್ಲಿ ಭಾನುವಾರ ಆರೋಪಿಸಿದರು.

ಚಾಮರಾಜನಗರಮೀಸಲು ಕ್ಷೇತ್ರದ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಪರ ನಗರದಲ್ಲಿ ಪ್ರಚಾರ ನಡೆಸಿ ಅವರು ಮಾತನಾಡಿದರು.

‘ಪ್ರತಿ ಬೂತ್‌ಗೆ ಹಣ ಹಂಚುವುದು ಹಾಗೂ ಹಣದ ವಿಚಾರವಾಗಿ ಸಂಸದ ಶಿವರಾಮೇಗೌಡ ಅವರ ಪುತ್ರ ಚೇತನ್‌ ಗೌಡ ಜೆಡಿಎಸ್‌ ಮುಖಂಡರ ಜೊತೆ 17 ನಿಮಿಷ ಮಾತನಾಡಿರುವ ದಾಖಲೆಲಭ್ಯವಾಗಿದೆ’ ಎಂದು ಹೇಳಿದರು.

ADVERTISEMENT

‘ಪ್ರತಿ ಬೂತ್‌ಗೆ₹ 5 ಲಕ್ಷ ಕೊಟ್ಟು₹ 150 ಕೋಟಿ ಖರ್ಚು ಮಾಡಿ ನಿಖಿಲ್‌ ಗೆಲ್ಲಿಸುವಂಥ ಸಂಕಲ್ಪ ಮಾಡಿರುವ ಕುಮಾಸ್ವಾಮಿ ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇದೆಯೇ’ ಎಂದು ಪ್ರಶ್ನಿಸಿದರು.

‘ಈ ಘಟನೆ, ದಾಖಲೆ ಪರಿಶೀಲನೆ ಮಾಡಿ ಯಾವ ಗುತ್ತಿಗೆದಾರರು ಪೊಲೀಸ್‌ ಜೀಪುಗಳಲ್ಲಿ ಹಣವನ್ನು ಹಂಚುವ ಪ್ರಯತ್ನ ಮಾಡುತ್ತಿದ್ದಾರೊ ಪರಿಶೀಲಿಸಬೇಕು. ಇದನ್ನು ಕೊನೆಗೊಳಿಸುವ ಪ್ರಯತ್ನವನ್ನು ಚುನಾವಣಾ ಆಯೋಗ ಮಾಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.