ADVERTISEMENT

ಸಿಎಂ ಹೇಳಿಕೆ ಸರ್ಕಾರದ ಸ್ಥಿತಿಗೆ ಕನ್ನಡಿ: ಯಡಿಯೂರಪ್ಪ

ಕಾಂಗ್ರೆಸ್ ಕಪಿಮುಷ್ಠಿಯಲ್ಲಿರುವುದಾಗಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 12:07 IST
Last Updated 10 ಜನವರಿ 2019, 12:07 IST

ಶಿವಮೊಗ್ಗ: ಕಾಂಗ್ರೆಸ್ ಕಪಿಮುಷ್ಠಿಯಲ್ಲಿ ಇರುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಸಮ್ಮಿಶ್ರ ಸರ್ಕಾರದ ಸ್ಥಿತಿಗೆ ಹಿಡಿದ ಕನ್ನಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಕುಟುಕಿದರು.

ಶಿವಮೊಗ್ಗದಲ್ಲಿ ಗುರುವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಕುಮಾರಸ್ವಾಮಿ ಸರ್ಕಾರದಲ್ಲಿ ತಮಗೆ ಯಾವುದೇ ಸ್ವಾತಂತ್ರ್ಯ ಇಲ್ಲ ಯಾರೂ ಮಾತು ಕೇಳುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ. ಇಂತಹ ವಾತಾವರಣ ರಾಜ್ಯದಲ್ಲಿದೆ ಎಂದು ಛೇಡಿಸಿದರು.

ADVERTISEMENT

ಮೇಲ್ಜಾತಿಯ ಬಡವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ನಿರ್ಧಾರ ಶ್ಲಾಘನೀಯ. ದೇಶದ 20 ಕೋಟಿ ಜನರಿಗೆ ಅನುಕೂಲವಾಗುತ್ತದೆ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.