ADVERTISEMENT

ಎತ್ತಿನಹೊಳೆ, ಯಗಚಿ ಶೀಘ್ರ ಪರಿಹಾರಕ್ಕೆ ಸಿ.ಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 19:15 IST
Last Updated 9 ಜನವರಿ 2019, 19:15 IST

ಬೆಂಗಳೂರು: ಹೇಮಾವತಿ ಮತ್ತು ಎತ್ತಿನಹೊಳೆ ಯೋಜನೆಗಳಡಿ ಭೂಸ್ವಾಧೀನ ಪ್ರಕ್ರಿಯೆ ಮತ್ತು ಪರಿಹಾರ ವಿತರಣೆ ಚುರುಕುಗೊಳಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದರು.

ಮುಖ್ಯಮಂತ್ರಿ ಗೃಹಕಚೇರಿ ‘ಕೃಷ್ಣಾ’ದಲ್ಲಿ ಹೇಮಾವತಿ ಜಲಾಶಯ ಮತ್ತು ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಹಾಗೂ ಯಗಚಿ ಯೋಜನೆಗಳ ಭೂಪರಿಹಾರ ವಿತರಣೆ ಸಂಬಂಧ ಸಭೆ ನಡೆಸಿದರು.

ಹಾಸನ ಜಿಲ್ಲೆಯ ಹೇಮಾವತಿ ಯೋಜನೆ ವ್ಯಾಪ್ತಿಯಡಿ (ಹೇಮಾವತಿ ಮತ್ತು ಯಗಚಿ ಜಲಾಶಯ) 2228 ಭೂ ಪಾವತಿ ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳಲ್ಲಿ ₹350 ಕೋಟಿ ಮೊತ್ತ ಪಾವತಿ ಮಾಡಬೇಕಾಗಿದೆ. ಈ ಪೈಕಿ 975 ಎಲ್‌ಸಿಎ ಪ್ರಕರಣಗಳಿದ್ದು, ₹94.28 ಕೋಟಿ ಮೊತ್ತವನ್ನು ನ್ಯಾಯಾಲಯಕ್ಕೆ ಠೇವಣಿ ಮಾಡಬೇಕಾಗಿದೆ. ಆದಷ್ಟು ಬೇಗ ಠೇವಣಿ ಹಣ ಬಿಡುಗಡೆ ಮಾಡಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.