ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ವಿವಾಹಕ್ಕೆ ಶುಭಕೋರಿ ಮಾಡಲಾಗಿದ್ದ ಟ್ವೀಟ್ ಮತ್ತು ಫೇಸ್ಬುಕ್ ಪೋಸ್ಟ್ ಅನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿಲಿಟ್ ಮಾಡಿದ್ದಾರೆ.
ಶುಕ್ರವಾರ ಮಧ್ಯಾಹ್ನ 12.59ರಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ನಿಖಿಲ್ ಕುಮಾರಸ್ವಾಮಿ ಅವರ ವಿವಾಹಕ್ಕೆ ಶುಭ ಕೋರಿದ್ದರು.
‘ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಶುಭಾಶಯಗಳು. ಇವರ ದಾಂಪತ್ಯ ಜೀವನವು ಸುಖಮಯವಾಗಿರಲಿ ಎಂದು ಹಾರೈಸುತ್ತೇನೆ,’ ಎಂದು ಸಿಎಂ ಟ್ವೀಟ್ ಮತ್ತು ಫೇಸ್ಬುಕ್ ಪೋಸ್ಟ್ ಹಾಕಿದ್ದರು.
ಆದರೆ, ಸಂಜೆ ಹೊತ್ತಿಗೆ ಟ್ವೀಟ್ ಮತ್ತು ಫೇಸ್ಬುಕ್ ಪೋಸ್ಟ್ಗಳೆರಡೂ ಡಿಲಿಟ್ ಆಗಿವೆ.
ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿಯ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ವಿವಾಹ ನಡೆದಿತ್ತು. ಸಂಬಂಧಿಕರಷ್ಟೇ ಇದ್ದ ಈ ವಿವಾಹ ಮಹೋತ್ಸವಕ್ಕೆ ಕೋವಿಡ್19 ಹಿನ್ನೆಲೆಯಲ್ಲಿ ಯಾವುದೇ ಗಣ್ಯರಿಗೆ ಆಹ್ವಾನ ಇರಲಿಲ್ಲ.
ಬಿಎಸ್ವೈ ಟ್ವೀಟ್
ಟ್ವೀಟ್ನ ಲಿಂಕ್
https://twitter.com/BSYBJP/status/1251050216628744192?s=19
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.