ADVERTISEMENT

ಬಿಜೆಪಿಗೆ ಬಿಎಸ್‌ವೈ ಆತ್ಮ ಇದ್ದಂತೆ: ನಳಿನ್‌ ಕುಮಾರ್‌ ಕಟೀಲ್‌

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 18:51 IST
Last Updated 19 ಜುಲೈ 2021, 18:51 IST
ನಳಿನ್‌ ಕುಮಾರ್‌ ಕಟೀಲ್‌
ನಳಿನ್‌ ಕುಮಾರ್‌ ಕಟೀಲ್‌   

ಮಂಗಳೂರು: 'ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆ ಗಳಿಲ್ಲ. ನಮ್ಮ ಪಕ್ಷಕ್ಕೆ ಯಡಿಯೂರಪ್ಪ ಆತ್ಮವಿದ್ದಂತೆ. ಯಡಿಯೂರಪ್ಪ ನಮ್ಮ ಸರ್ವಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ' ಎಂದು ನಳಿನ್ ಕುಮಾರ್‌ ಮಂಗಳೂರಿನಲ್ಲಿ ಹೇಳಿದ್ದಾರೆ.

'ವೈರಲ್ ಆಗಿರುವ ಆಡಿಯೊಗೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ. ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸುವುದಿಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT