ADVERTISEMENT

23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 21:03 IST
Last Updated 28 ಜುಲೈ 2020, 21:03 IST
ಕಲಬುರಗಿ ಪಿಡಿಎ ಕಾಲೇಜು ರಸ್ತೆಯಲ್ಲಿ  ಬುಧವಾರ ಮಧ್ಯಾಹ್ನ ಸುರಿದ ಮಳೆಯಲ್ಲಿ ಪಾದಚಾರಿಯೊಬ್ಬರು  ಕೊಡೆ ಹಿಡಿದು ರಸ್ತೆ ದಾಟುತ್ತಿದ್ದ ದೃಶ್ಯ
ಕಲಬುರಗಿ ಪಿಡಿಎ ಕಾಲೇಜು ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಸುರಿದ ಮಳೆಯಲ್ಲಿ ಪಾದಚಾರಿಯೊಬ್ಬರು ಕೊಡೆ ಹಿಡಿದು ರಸ್ತೆ ದಾಟುತ್ತಿದ್ದ ದೃಶ್ಯ    

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಜು.29 ಮತ್ತು 30ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕಲಬುರ್ಗಿ, ಗದಗ, ಧಾರವಾಡ, ಬೀದರ್, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಕಳೆದ ಐದು ದಿನಗಳಿಂದ ಮಳೆ ತಗ್ಗಿತ್ತು.

ADVERTISEMENT

ಈ ಭಾಗದಲ್ಲಿ ಆಗಸ್ಟ್ 1ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಎಚ್ಚರಿಕೆ: ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಎರಡು ದಿನಗಳವರೆಗೆ ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಮಳೆ, ಎಲ್ಲಿ ಎಷ್ಟು? : ಮಂಗಳೂರು ಹಾಗೂ ಮಂಕಿಯಲ್ಲಿ ಗರಿಷ್ಠ 7 ಸೆಂ.ಮೀ ಮಳೆಯಾಗಿದೆ. ಭಟ್ಕಳ, ಕಾರವಾರ 6, ಅಂಕೋಲಾ, ಗದಗ 5, ಬೆಳ್ತಂಗಡಿ 4, ಮೂಡುಬಿದಿರೆ, ಕುಂದಾಪುರ, ಕೊಪ್ಪಳ 3, ವಿರಾಜಪೇಟೆ, ದಾವಣಗೆರೆ ಹಾಗೂ ಹರಪನಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಉತ್ತಮ ಮಳೆ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಿದ್ದು, ಮೈಸೂರಿನಲ್ಲಿ ಬಿರುಸಿನಿಂದ ಸುರಿದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕ್ಷೀಣಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.