ಮೈಸೂರು: ಅಂತರರಾಷ್ಟ್ರೀಯ ಯೋಗಪಟು ಎಚ್.ಖುಷಿ ಮನವಿ ಮೇರೆಗೆ ಯೋಗವನ್ನು ಕ್ರೀಡಾ ವರ್ಗಕ್ಕೆ ಸೇರ್ಪಡೆ ಮಾಡುವಂತೆ ಕೇಂದ್ರ ಆಯುಷ್ ಇಲಾಖೆಯು ಯುವಜನ ಮತ್ತು ಕ್ರೀಡಾ ಇಲಾಖೆಗೆ ಶಿಫಾರಸು ಮಾಡಿದೆ.
ಸ್ವಚ್ಛ ಭಾರತದ ರಾಯಭಾರಿಯೂ ಆಗಿರುವ ಎಚ್.ಖುಷಿ ಅವರು ಕಳೆದ ಡಿಸೆಂಬರ್ 31ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ, ಯೋಗವನ್ನು ಕ್ರೀಡಾ ವರ್ಗದ ಆದ್ಯ ಗುಂಪಿನಲ್ಲಿ ಸೇರ್ಪಡೆ ಮಾಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ್ದ ಪ್ರಧಾನಿ, ಕ್ರೀಡಾ ವರ್ಗಕ್ಕೆ ಸೇರ್ಪಡೆ ಮಾಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಪ್ರಧಾನಮಂತ್ರಿ ಕಚೇರಿಯ ನಿರ್ದೇಶನದನ್ವಯ ಆಯುಷ್ ಇಲಾಖೆ ಸಚಿವ ಶ್ರೀಪಾದ ನಾಯಕ್ ಅವರು ಯುವಜನ ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.