ADVERTISEMENT

ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣ: ಶಾಸಕ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 15:36 IST
Last Updated 8 ಡಿಸೆಂಬರ್ 2025, 15:36 IST
ಶಾಸಕ ವಿನಯ ಕುಲಕರ್ಣಿ
ಶಾಸಕ ವಿನಯ ಕುಲಕರ್ಣಿ   

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿಯಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಈ ಸಂಬಂಧ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಸೋಮವಾರ ಪ್ರಕಟಿಸಿದರು. 

ಪ್ರಕರಣವೇನು?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣದ ಪ್ರಮುಖ ಆರೋಪಿ ವಿನಯ ಕುಲಕರ್ಣಿ ಅವರು 2025ರ ಜೂನ್‌ 13ರಿಂದ ನ್ಯಾಯಾಂಗ ಬಂಧನದಲ್ಲಿದ್ದು ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.