ಬೆಂಗಳೂರು: ಸಿ.ಡಿ ಪ್ರಕರಣದ ಯುವತಿ ಸದ್ಯದಲ್ಲೇ ನಗರದ ನ್ಯಾಯಾಲಯಕ್ಕೆ ಹಾಜರಾಗಲಿದ್ದು, ಅದಕ್ಕೆ ಬೇಕಾದ ತಯಾರಿಯನ್ನು ಯುವತಿ ಪರ ವಕೀಲರು ಮಾಡುತ್ತಿದ್ದಾರೆ.
ಯುವತಿ ಪರ ವಕೀಲರು, ಮ್ಯಾಜಿಸ್ಟ್ರೇಟ್ ಕೊರ್ಟ್ನ ಉಪ ರಿಜಿಸ್ಟ್ರಾರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.
'ಬೆಂಗಳೂರು ಹೊರವಲಯದಲ್ಲಿ ಯುವತಿ ಇದ್ದಾರೆ. ನ್ಯಾಯಾಧೀಶರ ಎದುರು ಸ್ವ-ಇಚ್ಛಾ ಹೇಳಿಕೆ ನೀಡಲು ಬಯಸಿದ್ದಾರೆ. ಅನುಮತಿ ನೀಡಿ' ಎಂದು ಯುವತಿ ಪರ ವಕೀಲರು ಕೋರಿದ್ದಾರೆ.
ಅರ್ಜಿ ಪರಿಶೀಲನೆ ನಡೆಯುತ್ತಿದೆ. ಒಪ್ಪಿಗೆ ಸಿಕ್ಕ ತಕ್ಷಣವೇ ವಕೀಲರ ತಂಡದೊಂದಿಗೆ ಯುವತಿ ನ್ಯಾಯಾಲಯಕ್ಕೆ ಬರಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.