ADVERTISEMENT

ಯುವತಿಯ ಕೊಂದ ರೌಡಿ: ಒಂದು ಕೈಯಲ್ಲಿ ತಾಳಿ, ಇನ್ನೊಂದು ಕೈಯಲ್ಲಿ ಚಾಕು

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 11:53 IST
Last Updated 14 ಜುಲೈ 2020, 11:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೊಬ್ಬರನ್ನು ಅವರ ಸ್ನೇಹಿತನೇ ಕೊಲೆ ಮಾಡಿದ್ದಾನೆ. ಕೊಲೆ ಆರೋಪಿ ರೌಡಿ ಅಭಿಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕಾಶ ನಗರದಲ್ಲಿ ಯುವತಿ ವಾಸವಿದ್ದರು. ಒಂದು ಕೈಯಲ್ಲಿ ಚಾಕು ಒಂದು ಕೈಯಲ್ಲಿ ತಾಳಿ ಹಿಡಿದು ಯುವತಿ ಮನೆ ಬಳಿ ಹೋಗಿದ್ದ ಆರೋಪಿ, ಮದುವೆ ಆಗುವಂತೆ ಪೀಡಿಸಿದ್ದ.

ನಂತರ ಯುವತಿಯನ್ನು ಅಪಹರಿಸಿ ಗಿರಿನಗರಕ್ಕೆ ಸ್ನೇಹಿತರ ಮನೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿಯೇ ಯುವತಿಗೆ ತಾಳಿ ಕಟ್ಟಲು ಮುಂದಾಗಿದ್ದ. ಅದಕ್ಕೆ ಯುವತಿ ವಿರೋಧಿಸಿದ್ದಳು. ಅವಾಗಲೇ ಚಾಕುವಿನಿಂದ ಇರಿದು ಕೊಂದಿದ್ದಾನೆ.

ADVERTISEMENT

'ಯುವತಿ ಹಾಗೂ ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಗೊತ್ತಾಗಿದೆ. ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ' ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.