ADVERTISEMENT

ಯುವ ಕಾಂಗ್ರೆಸ್‌ಗೆ ಭದ್ರಾವತಿಯ ಶ್ರೀನಿವಾಸ್‌ ಮಧ್ಯಂತರ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 29 ಜುಲೈ 2019, 18:36 IST
Last Updated 29 ಜುಲೈ 2019, 18:36 IST
ಶ್ರೀನಿವಾಸ್‌
ಶ್ರೀನಿವಾಸ್‌   

ನವದೆಹಲಿ: ಭಾರತೀಯ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿದ್ದ ಶ್ರೀನಿವಾಸ್‌ ಬಿ.ವಿ. ಅವರಿಗೆ ಸಂಘಟನೆಯ ಮಧ್ಯಂತರ ಅಧ್ಯಕ್ಷರಾಗಿ ಬಡ್ತಿ ನೀಡಲಾಗಿದೆ.

ಶ್ರೀನಿವಾಸ್‌ ಅವರು ಭದ್ರಾವತಿಯವರು. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರಿಗೆ 2010ರಲ್ಲಿ ಮಸಿ ಬಳಿದ ಬಳಿಕ ಅವರು ಸುದ್ದಿಯಾಗಿದ್ದರು.

ಕೇಶವ ಚಂದ್‌ ಯಾದವ್‌ ಅವರು ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದರು. ಆದರೆ, ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ರಾಹುಲ್‌ ಗಾಂಧಿ ಅವರು ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿದ ಬಳಿಕ ಯಾದವ್‌ ಅವರೂ ಹುದ್ದೆ ತ್ಯಜಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.