ADVERTISEMENT

ಹುಬ್ಬಳ್ಳಿ: ಯುವಕರು ನೀರುಪಾಲಾದ ದೃಶ್ಯ ಮೊಬೈಲ್‌ನಲ್ಲಿ ಸೆರೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2022, 3:17 IST
Last Updated 30 ಆಗಸ್ಟ್ 2022, 3:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹುಬ್ಬಳ್ಳಿ: ಬೆಣ್ಣೆಹಳ್ಳದ ಪ್ರವಾಹದಿಂದ ಜಲಾವೃತಗೊಂಡ ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ–ಕುಸುಗಲ್ ರಸ್ತೆಯನ್ನು ಸೋಮವಾರ ದಾಟುತ್ತಿದ್ದ ನಾಲ್ವರು ಯುವಕರು, ನೀರಿನಲ್ಲಿ ಸೆಳೆತಕ್ಕೆ ಸಿಲುಕಿದರು.

ಅದೃಷ್ಟವಶಾತ್ ಮೂವರು ಈಜಿ ದಡ ಸೇರಿದರೆ, ಬ್ಯಾಹಟ್ಟಿಯ ಆನಂದ ಹಿರೇಗೌಡ್ರ ನೀರು ಪಾಲಾದರು. ಈ ದೃಶ್ಯ ಹಳ್ಳದಂಚಿನಲ್ಲಿ ನಿಂತಿದ್ದ ಸ್ಥಳೀಯರ ಮೊಬೈಲ್‌ ಫೋನ್‌ನಲ್ಲಿ ಸೆರೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಂಜೆವರೆಗೂ ಆನಂದ ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗಲಿಲ್ಲ. ಮಂಗಳವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT