ADVERTISEMENT

ಎಂಟು ಕ್ಷೇತ್ರದಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಲು ದೇವೇಗೌಡ ಸ್ವತಂತ್ರರು: ಜಮೀರ್

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2019, 9:57 IST
Last Updated 20 ಮಾರ್ಚ್ 2019, 9:57 IST
   

ಬೆಂಗಳೂರು: ಮಂಡ್ಯ, ತುಮಕೂರು ಕ್ಷೇತ್ರದವರೂ ಬಂದು ನಿಲ್ಲುವಂತೆ ದೇವೇಗೌಡರಿಗೆ ಆಹ್ವಾನ ನೀಡುತ್ತಿದ್ದಾರೆ. ಅವರಿಗೆ ಎಂಟು ಕ್ಷೇತ್ರ ನೀಡಲಾಗಿದೆ. ಎಂಟರಲ್ಲಿ ಅವರು ಎಲ್ಲಿ ಬೇಕಾದರೂ ನಿಲ್ಲಲು ಸ್ವತಂತ್ರರು ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದರು.

ದೇವೇಗೌಡ ಅವರನ್ನು ಇಂದು ಬೆಳಿಗ್ಗೆ ಭೇಟಿ ಮಾಡಿ ರಾಜಕೀಯ ವಿಚಾರ ಚರ್ಚಿಸಿದ್ದೇನೆ ಎಂದರು.

ಬೆಂಗಳೂರು ಉತ್ತರದಿಂದ ನಿಲ್ಲುವಂತೆ ನಾವು ಹೇಳಿದ್ದೇವೆ. ನಿಂತರೆ ನಾವು ಗೆಲ್ಲಿಸಿಕೊಂಡು ಬರುವ ಬಗ್ಗೆ ಹೇಳಿದ್ದೇವೆ ಎಂದರು.

ADVERTISEMENT

ಸುಮಲತಾಗೆ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಖಂಡರು ಯಾರೂ ಸುಮಲತಾ ಅವರಿಗೆ ಬೆಂಬಲ ನೀಡಿಲ್ಲ. ಕೆಲವು ಕಾರ್ಯಕರ್ತರು ಮಾತ್ರ ನಾಮಪತ್ರ ಸಲ್ಲಿಕೆ ವೇಳೆ ಕಾಣಿಸಿಕೊಂಡಿದ್ದಾರೆ. ಅಂಬರೀಷ್ ಮೇಲಿನ ಅಭಿಮಾನದಿಂದ ಕಾರ್ಯಕರ್ತರು ಹೋಗುತ್ತಿದ್ದಾರೆ ಅಷ್ಟೇ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.