ADVERTISEMENT

ಜಮೀರ್‌ಗೆ ಏನು ಮಾರ್ಗದರ್ಶನ ಮಾಡಿದ್ದೀರಿ: ಡಿಕೆಶಿಗೆ ಬಿಜೆಪಿ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2021, 9:47 IST
Last Updated 11 ಆಗಸ್ಟ್ 2021, 9:47 IST
ಡಿ.ಕೆ.ಶಿವಕುಮಾರ್‌, ಜಮೀರ್ ಅಹಮ್ಮದ್
ಡಿ.ಕೆ.ಶಿವಕುಮಾರ್‌, ಜಮೀರ್ ಅಹಮ್ಮದ್   

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್‌ಗೆ ಏನು ಮಾರ್ಗದರ್ಶನ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿ ಪ್ರಶ್ನಿಸಿದೆ.

ಶಿವಾಜಿನಗರ ವ್ಯಾಪ್ತಿಯ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅವರ ಮನೆ, ಚಾಮರಾಜಪೇಟೆಯಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಜಮೀರ್ ಒಡೆತನದ ಫ್ಲ್ಯಾಟ್ ಸೇರಿದಂತೆ ಹಲವು ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಕಳೆದ ಗುರುವಾರ ದಾಳಿ ಮಾಡಿದ್ದರು.

ಆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರು ಮಂಗಳವಾರ ಜಮೀರ್ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ್ದರು.

ADVERTISEMENT

ಡಿಕೆಶಿ ಮತ್ತು ಜಮೀರ್‌ ನಡುವಿನ ಭೇಟಿಯ ಬಗ್ಗೆ ಟ್ವೀಟ್‌ ಮೂಲಕ ವ್ಯಂಗ್ಯವಾಡಿರುವ ಬಿಜೆಪಿ, 'ಕಪ್ಪು ಹಣ ಸಂಗ್ರಹ, ತೆರಿಗೆ ವಂಚನೆ ಪ್ರಕರಣದ ಆರೋಪಿಗೆ ಏನು ಮಾರ್ಗದರ್ಶನ ಮಾಡಿದ್ದೀರಿ' ಎಂದು ಪ್ರಶ್ನಿಸಿದೆ.

'ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಡೆ ಇರುವ ಕೆಪಿಸಿಸಿ ಭ್ರಷ್ಟಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೇ, ಮಾರ್ಗದರ್ಶನ ಮಾಡುವುದಕ್ಕೆ ಜಮೀರ್‌ ಅವರೇನು ದೇಶದ ಗಡಿ ಕಾಯುವುದಕ್ಕೆ ಹೊರಟಿದ್ದಾರೆಯೇ' ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.