ADVERTISEMENT

ಒಡಂಬಡಿಕೆಗೆ ಸಹಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2011, 19:30 IST
Last Updated 4 ಅಕ್ಟೋಬರ್ 2011, 19:30 IST

ಬರ್ನ್, (ಪಿಟಿಐ): ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಸ್ವಿಟ್ಜರ್ಲೆಂಡ್ ಸರ್ಕಾರಗಳು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದ್ದು, ಇದರಿಂದ ಸ್ವಿಸ್ ಬ್ಯಾಂಕುಗಳಲ್ಲಿ ಇಡಲಾಗಿರುವ ಕಪ್ಪು ಹಣದ ಬಗ್ಗೆ ಮಾಹಿತಿ ಪಡೆಯಲು ಭಾರತಕ್ಕೆ ಅನುಕೂಲವಾಗಲಿದೆ.

 ಸ್ವಿಟ್ಜರ್ಲೆಂಡ್‌ನಲ್ಲಿಯ ಭಾರತದ ರಾಯಭಾರಿ ಚಿತ್ರಾ ನಾರಾಯಣನ್ ಮತ್ತು ಸ್ವಿಸ್ ಹಣಕಾಸು ಖಾತೆಯ ಕಾರ್ಯದರ್ಶಿ ಮೈಕಲ್ ಅಂಬುಹಲ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ಒಪ್ಪಂದವು ದ್ವಿಮುಖ ತೆರಿಗೆ ವ್ಯವಸ್ಥೆಯನ್ನು ರದ್ದುಪಡಿಸಲು ಸಹ ಸಹಕಾರಿಯಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.