ADVERTISEMENT

ಕಾರಾಗೃಹ ಸಿಬ್ಬಂದಿ ಒತ್ತೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2012, 19:30 IST
Last Updated 13 ಜುಲೈ 2012, 19:30 IST

ಇಸ್ಲಾಮಾಬಾದ್ (ಪಿಟಿಐ): ಸೌಲಭ್ಯಕ್ಕೆ ಆಗ್ರಹಿಸಿ ಇಲ್ಲಿನ ಹೈದರಾಬಾದ್‌ನ ಕೇಂದ್ರ ಕಾರಾಗೃಹದಲ್ಲಿ ಶುಕ್ರವಾರ ಕೈದಿಗಳು ನಡೆಸಿದ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿದ್ದು, 15 ಮಂದಿ ಕಾರಾಗೃಹ ಸಿಬ್ಬಂದಿಯನ್ನು ಕೈದಿಗಳು ಒತ್ತೆಯಾಳನ್ನಾಗಿರಿಸಿಕೊಂಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಕಾರಾಗೃಹ) ಗುಲ್ಜಾರ್ ಚಾನ್ ತಿಳಿಸಿದ್ದಾರೆ.

ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಂಡ ಸಂದರ್ಭದಲ್ಲಿ ಒಬ್ಬ ಕೈದಿ ಮೃತಪಟ್ಟಿದ್ದಾನೆ. ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.