ADVERTISEMENT

ಗ್ರಾಹಕರನ್ನು ಸೆಳೆಯಲು ರಿಯಾಯಿತಿ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2011, 19:30 IST
Last Updated 17 ಅಕ್ಟೋಬರ್ 2011, 19:30 IST

ದುಬೈ (ಪಿಟಿಐ): ದೀಪಾವಳಿ ಹಬ್ಬಕ್ಕೆ ಸಜ್ಜಾಗಿರುವ ಇಲ್ಲಿನ ಭಾರತೀಯರು ವಾಣಿಜ್ಯ ಕ್ಷೇತ್ರದಲ್ಲಿ ತಮ್ಮ ವ್ಯಾಪಾರ ವೃದ್ಧಿಗೆ ಒತ್ತು ನೀಡಿದ್ದಾರೆ.ಏರ್‌ಲೈನ್ಸ್ ಹೋಟೆಲ್, ಆಭರಣ ಅಂಗಡಿ ಹಾಗೂ ಇನ್ನಿತರ ವ್ಯಾಪಾರಸ್ಥರು ಈ ಸಮಯದಲ್ಲಿ ವ್ಯವಹಾರ ವೃದ್ಧಿಸಿಕೊಳ್ಳಲು ಮುಂದಾಗಿದ್ದು, ಅದಕ್ಕಾಗಿ ಗ್ರಾಹಕರಿಗೆ ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. 
 
ಹೋಟೆಲ್‌ಗಳಲ್ಲಿಯೂ ಸಹ ಗ್ರಾಹಕರಿಗೆ ಕಡಿಮೆ ದರದಲ್ಲಿ ವಿವಿಧ ಭಕ್ಷ್ಯ ಭೋಜನ ನೀಡಲು ವ್ಯವಸ್ಥೆ ಮಾಡಿದ್ದು, ಗ್ರಾಹಕರನ್ನು ತಮ್ಮತ್ತ ಸೆಳೆಯುವ ಯತ್ನ ಮಾಡಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.