ವಾಷಿಂಗ್ಟನ್ (ಐಎಎನ್ಎಸ್): ದಕ್ಷಿಣ ಸುಡಾನ್ನಲ್ಲಿ ನಡೆಯುತ್ತಿರುವ ಹಿಂಸಾಚಾರ ನಿಯಂತ್ರಿಸಲು ಅಗತ್ಯ ನೆರವು ನೀಡುವುದಕ್ಕಾಗಿ ವಿಶೇಷ ರಾಯಭಾರಿಯನ್ನು ಕಳುಹಿಸಲಾಗಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ತಿಳಿಸಿದ್ದಾರೆ.
ದಕ್ಷಿಣ ಸುಡಾನ್ನ ಸಶಸ್ತ್ರ ಹಿಂಸಾಚಾರ ಕೊನೆಗೊಳಿಸಲು ನಡೆಯುತ್ತಿರುವ ಪ್ರಾದೇಶಿಕ ಪ್ರಯತ್ನಕ್ಕೆ ವಿಶೇಷ ರಾಯಭಾರಿ ಡೊನಾಲ್ಡ್ ಬೂತ್ ನೆರವು ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಸುಡಾನ್ನಲ್ಲಿ ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯ ಮೇಲೆ ಬಂಡುಕೋರರು ದಾಳಿ ನಡೆಸಿ ಇಬ್ಬರು ಭಾರ-ತೀಯ ಯೋಧರು ಸೇರಿದಂತೆ ೨೨ ಮಂದಿಯನ್ನು ಹತ್ಯೆ ಮಾಡಿರುವುದನ್ನು ಸ್ಮರಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.