ADVERTISEMENT

ದುಸ್ಸಾಹಸ ಬೇಡ: ಎಚ್ಚರಿಕೆ

ಪಿಟಿಐ
Published 28 ಮಾರ್ಚ್ 2018, 19:30 IST
Last Updated 28 ಮಾರ್ಚ್ 2018, 19:30 IST
ಸಾಂದರ್ಭಿಕ ಚಿತ್ರ.
ಸಾಂದರ್ಭಿಕ ಚಿತ್ರ.   

ಇಸ್ಲಾಮಾಬಾದ್‌: ‘ಒಂದು ವೇಳೆ ಗಡಿ ಪ್ರದೇಶದಲ್ಲಿ ಏನಾದರೂ ದುಸ್ಸಾಹಸಕ್ಕೆ ಕೈ ಹಾಕಿದರೆ ನಾವು ಸಮ್ಮನೆ ಬಿಡುವುದಿಲ್ಲ’ ಎಂದು ಪಾಕಿಸ್ತಾನದ ಸೇನೆಯು ಭಾರತಕ್ಕೆ ಎಚ್ಚರಿಕೆ ನೀಡಿದೆ.

‘ನಮ್ಮ ಸೇನಾ ಶಕ್ತಿಯ ಬಗ್ಗೆ ತುಚ್ಛೀಕರಣ ಬೇಡ. ಭಾರತಕ್ಕೆ ತಿರುಗುತ್ತರ ನೀಡಲು ನಾವು ಸದಾ ಸಿದ್ಧರಾಗಿದ್ದೇವೆ’ ಎಂದು ಸೇನಾಪಡೆಯ ವಕ್ತಾರ ಮೇಜರ್‌ ಜನರಲ್‌ ಅಸೀಫ್‌ ಗಫೂರ್‌ ಹೇಳಿದ್ದಾರೆ.

ಭಾರತವು ಏಕಾಏಕಿ ದಾಳಿ ನಡೆಸಿದರೆ ಏನು ಕ್ರಮ ಕೈಗೊಳ್ಳುವಿರಿ ಎಂದು ಕೇಳಿದ ಪ್ರಶ್ನೆಗೆ ಅಸೀಫ್‌ ಈ ರೀತಿಪ್ರತಿಕ್ರಿಯಿಸಿದ್ದಾರೆ.

ADVERTISEMENT

ಗಡಿ ನಿಯಂತ್ರಣ ರೇಖೆಯ ಬಳಿ ಭಾರತವು ಪಾಕಿಸ್ತಾನದ 30 ಸೈನಿಕರನ್ನು ಈ ವರ್ಷ ಹತ್ಯೆ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.