ಕಠ್ಮಂಡು (ಪಿಟಿಐ): ನೇಪಾಳದಲ್ಲಿ ಅರಸೊತ್ತಿಗೆ ಕೊನೆಗೊಂಡ ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ದೇಶದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿರುವ ಪದಚ್ಯುತ ದೊರೆ ಜ್ಞಾನೇಂದ್ರ ಶಾ ಅವರು, `ನೇಪಾಳದ ಜನತೆ ಬಯಸಿದಲ್ಲಿ ರಾಜಪ್ರಭುತ್ವ ಮರುಸ್ಥಾಪಿಸಿ ಪುನಃ ಸಿಂಹಾರೋಹಣ~ ಮಾಡುವ ತಮ್ಮ ಮನದ ಇಂಗಿತವನ್ನು ಬಿಚ್ಚಿಟ್ಟಿದ್ದಾರೆ.
ಶನಿವಾರ ತಮ್ಮ 66ನೇ ಜನ್ಮದಿನ ಆಚರಿಸಿಕೊಂಡ ಅವರು ಅಂತರರಾಷ್ಟ್ರೀಯ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ, `ದೇಶದ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಇಷ್ಟಪಡದೆ, ರಾಜನಾಗಿ ಮುಂದುವರೆಯುವ ಆಶಯ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.