ಇಸ್ಲಾಮಾಬಾದ್ (ಪಿಟಿಐ): ಮುಂಬೈ ದಾಳಿ ಕುರಿತು ಸಾಕ್ಷ್ಯ ಸಂಗ್ರಹಿಸಲು ಭಾರತಕ್ಕೆ ಭೇಟಿ ನೀಡಲಿರುವ ನ್ಯಾಯಾಂಗ ಆಯೋಗದ ವಿಚಾರಣಾ ವ್ಯಾಪ್ತಿ ಬಗ್ಗೆ ಭಾರತ ಮತ್ತು ಪಾಕಿಸ್ತಾನ ಐದು ದಿನಗಳ ಮಾತುಕತೆ ಬಳಿಕ ಮಂಗಳವಾರ ಒಪ್ಪಂದಕ್ಕೆ ಬಂದಿವೆ.
ಭಾರತದ ನಾಲ್ವರು ಸದಸ್ಯರ ನಿಯೋಗದ ಜತೆ ಪಾಕ್ ಅಧಿಕಾರಿಗಳು ಹಲವು ಸುತ್ತಿನ ಮಾತುಕತೆ ನಡೆಸಿದ ನಂತರ ಅಂತಿಮ ನಿರ್ಧಾರ ಕೈಗೊಂಡರು ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.