ಇಸ್ಲಾಮಾಬಾದ್ (ಪಿಟಿಐ): 26/11ರ ಮುಂಬೈ ದಾಳಿ ಆರೋಪಿಗಳ ವಿಚಾರಣೆ ಶನಿವಾರ ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶರ ಗೈರುಹಾಜರಿಯಿಂದಾಗಿ ಈ ತಿಂಗಳ 23ಕ್ಕೆ ಮುಂದೂಡಲ್ಪಟ್ಟಿದೆ.
ಈ ಮೊದಲು ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದ ನ್ಯಾಯಾಧೀಶ ಶಾಹೀದ್ ರಫೀಕ್ ಪಂಜಾಬ್ ಪ್ರಾಂತ್ಯದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ವರ್ಗಾವಣೆಯಾಗ್ದ್ದಿದ್ದಾರೆ. ಈ ಜಾಗಕ್ಕೆ ಇದುವರೆಗೂ ಬೇರೆ ನ್ಯಾಯಾಧೀಶರು ನೇಮಕವಾಗದ ಕಾರಣ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ. ಈವರೆಗೆ ಐದು ಬಾರಿ ಈ ವಿಚಾರಣೆ ಮುಂದೂಡಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.