ADVERTISEMENT

ಫೆಬ್ರುವರಿ 4ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2011, 19:30 IST
Last Updated 23 ಜನವರಿ 2011, 19:30 IST

ಇಸ್ಲಾಮಾಬಾದ್(ಪಿಟಿಐ): ಮುಂಬೈ ದಾಳಿ ಪ್ರಕರಣದ ಶಂಕಿತ ಆರೋಪಿ ಎಲ್‌ಇಟಿಯ ಝಾಕೀರ್  ರೆಹಮಾನ್ ಲಖ್ವಿ ಸೇರಿದಂತೆ ಆರು ಮಂದಿಯ ಬಗ್ಗೆ ವಿಚಾರಣೆ ನಡೆಸುತ್ತಿರುವ ಭಯೋತ್ಪಾದಕ ನಿಗ್ರಹ ಕೋರ್ಟ್ ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿದೆ.

ರಾವಲ್ಪಿಂಡಿಯಲ್ಲಿರುವ ಭಯೋತ್ಪಾದನಾ ನಿಗ್ರಹ ಕೋರ್ಟ್‌ನ ನ್ಯಾಯಾಧೀಶ ರಾಣಾ ನಿಸಾರ್ ಅಹಮದ್ ಅವರು ವಿಚಾರಣೆಯನ್ನು ಹಲವು ಬಾರಿ ಮುಂದೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.