ನವದೆಹಲಿ (ಪಿಟಿಐ): ಭಾರತೀಯ ರಿಸರ್ವ್ ಬ್ಯಾಂಕ್ ಅನಿರೀಕ್ಷಿತವಾಗಿ ಬಡ್ಡಿ ದರ ಏರಿಕೆ ಮಾಡಿರುವುದು ಹೂಡಿಕೆದಾರರಲ್ಲಿ ಆತಂಕ ಮತ್ತು ಗೊಂದಲ ಮೂಡಿಸಿದ್ದು, ಈ ವಾರವೂ ಪೇಟೆಯಲ್ಲಿ ಕುಸಿತ ಕಾಣಬಹುದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
ವಾಣಿಜ್ಯೋದ್ಯಮ ಸಂಸ್ಥೆಗಳು ‘ಆರ್ಬಿಐ’ನ ಬಿಗಿ ಹಣಕಾಸು ನೀತಿಯನ್ನು ಟೀಕಿಸಿವೆ. ಇದರ ಪರಿಣಾಮ ಈ ವಾರ ಪೇಟೆಯಲ್ಲಿ ಕಾಣಿಸಿಕೊಳ್ಳಲಿದೆ ಎಂದು ಬೊನಾಂಜಾ ಪೋರ್ಟ್ಪೊಲಿಯೊ ಸಂಸ್ಥೆಯ ಉಪಾಧ್ಯಕ್ಷ ರಾಕೇಶ್ ಗೋಯಲ್ ಅಭಿಪ್ರಾಯಪಟ್ಟಿದ್ದಾರೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಸೆ.1ರಿಂದ 15ರವರೆಗೆ ಷೇರುಪೇಟೆಯಲ್ಲಿ ₨11 ಸಾವಿರ ಕೋಟಿ ಬಂಡವಾಳ ತೊಡಗಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.