ADVERTISEMENT

ಬಹ್ರೇನ್‌: ಡಿ. 17ಕ್ಕೆ ‘ಕನ್ನಡ ವೈಭವ’

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2013, 19:30 IST
Last Updated 2 ಡಿಸೆಂಬರ್ 2013, 19:30 IST

ದುಬೈ (ಐಎಎನ್‌ಎಸ್‌): ಬಹ್ರೇನ್‌ನ ರಾಜಧಾನಿ ಮನಾಮದಲ್ಲಿ ಡಿ. 17 ರಂದು ಕರ್ನಾಟಕದ ಇತಿಹಾಸ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ‘ಕನ್ನಡ ವೈಭವ’ ಕಾರ್ಯಕ್ರಮ ನಡೆಯಲಿದೆ.

ಕನ್ನಡ ಸಂಘ, ಬಹ್ರೇನ್‌ನ ಪ್ರಮುಖ ವಲಸಿಗ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದಿಂದ ಮನಾಮದ ಆಲ್‌ ರಾಜಾ ಶಾಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಿದೆ ಎಂದು ಗಲ್ಫ್‌ ಡೈಲಿ ನ್ಯೂಸ್‌ ವರದಿ ಮಾಡಿದೆ.

‘ಖ್ಯಾತ ಕೊಳಲುವಾದಕ ಪ್ರವೀಣ್ ಗೋಡ್ಕಿಂಡಿ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿದ್ದಾರೆ. ನಮ್ಮ ಕಲೆ ಸಂಸ್ಕೃತಿಯನ್ನು ಪ್ರಸ್ತುತಪಡಿಸಲು ನಾವೆಲ್ಲ ಮತ್ತೊಮ್ಮೆ ಒಂದಾಗುತ್ತಿದ್ದೇವೆ’ ಎಂದು ಕನ್ನಡ ಸಂಘದ ಅಧ್ಯಕ್ಷ ಬಿ. ರಾಜ್‌ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.