ADVERTISEMENT

ಭಾರತೀಯ ಕೈದಿಗಳಿಗೆ ಅಗತ್ಯ ವಸ್ತುಗಳ ನೆರವು

​ಪ್ರಜಾವಾಣಿ ವಾರ್ತೆ
Published 19 ಜನವರಿ 2011, 19:30 IST
Last Updated 19 ಜನವರಿ 2011, 19:30 IST

ಢಾಕಾ (ಪಿಟಿಐ): ಬಾಂಗ್ಲಾದೇಶದ ದಿನಜ್‌ಪುರ್ ಸೆಂಟ್ರಲ್ ಜೈಲಿನಲ್ಲಿರುವ ಭಾರತೀಯ ಕೈದಿಗಳಿಗೆ ಬುಧವಾರ ರಾಷ್ಟ್ರೀಯ ಜನೋಪಕಾರಿ ಸಮಾಜದಿಂದ ಅಗತ್ಯ ವಸ್ತುಗಳನ್ನು ಪೂರೈಸಲಾಯಿತು.

ಗಡಿ ಅತಿಕ್ರಮಣ ಪ್ರವೇಶ ಹಾಗೂ ಕಳ್ಳಸಾಗಾಣಿಕೆಗೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ 15 ಭಾರತೀಯ ಕೈದಿಗಳಿಗೆ ಬಾಂಗ್ಲಾದೇಶದ ರೆಡ್ ಕ್ರೆಸೆಂಟ್ ಸೊಸೈಟಿಯು ಚಳಿಗಾಲದ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ವಿತರಿಸಿತು ಎಂದು ದಿನಜ್‌ಪುರ್ ಜೈಲಿನ ಸೂಪರಿಂಟೆಂಡೆಂಟ್ ಶಹಜಹಾನ್ ಅಹ್ಮದ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.