ADVERTISEMENT

ಭ್ರಷ್ಟಾಚಾರ ಪ್ರಕರಣ ಮರುತನಿಖೆ ಖಲೀದಾ ಅರ್ಜಿ ವಜಾ

ಪಿಟಿಐ
Published 2 ಜುಲೈ 2017, 19:29 IST
Last Updated 2 ಜುಲೈ 2017, 19:29 IST
ಭ್ರಷ್ಟಾಚಾರ ಪ್ರಕರಣ  ಮರುತನಿಖೆ ಖಲೀದಾ ಅರ್ಜಿ ವಜಾ
ಭ್ರಷ್ಟಾಚಾರ ಪ್ರಕರಣ ಮರುತನಿಖೆ ಖಲೀದಾ ಅರ್ಜಿ ವಜಾ   

ಢಾಕಾ: ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಕೋರಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಕೆಳ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಸುಸೂತ್ರವಾಗಿ ನಡೆಸಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಸಿನ್ಹಾ ನೇತೃತ್ವದ ಪೀಠವು ಖಲೀದಾ ಅರ್ಜಿಯನ್ನು ವಜಾಗೊಳಿಸಿ, ಹೈಕೋರ್ಟ್‌ ತೀರ್ಪನ್ನು ಎತ್ತಿ ಹಿಡಿದಿದೆ.

ಖಲೀದಾ ಅವರು ಅಧ್ಯಕ್ಷೆಯಾಗಿರುವ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಷನಲ್‌ ಪಾರ್ಟಿ (ಬಿಎನ್‌ಪಿ) 2014ರ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸಿದ ನಂತರ ಸಂಸತ್‌ನಲ್ಲಿ ಪ್ರಾತಿನಿಧ್ಯ ಕಳೆದುಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.