ವಾಷಿಂಗ್ಟನ್ (ಪಿಟಿಐ): ಕಳೆದ ಎರಡು ದಶಕಗಳಿಂದ ಮಹಾರಾಷ್ಟ್ರದಲ್ಲಿ ಉತ್ತಮ ರಾಜಕೀಯ ನಾಯಕರ ಕೊರತೆ ಎದುರಾಗಿದ್ದು, ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಅಂದುಕೊಂಡಿರುವುದಕ್ಕಿಂತಲೂ ಬಹಳ ಕೆಳಮಟ್ಟಕ್ಕೆ ಇಳಿದಿದೆ. ಸ್ವಲ್ಪ ಅಭಿವೃದ್ಧಿಯಾದರೂ ದೊಡ್ಡ ಗೆಲುವಿನಂತೆಯೇ ಸರಿ ಎಂಬ ವಿಷಯವನ್ನು ವಿಕಿಲೀಕ್ಸ್ ಬಹಿರಂಗಪಡಿಸಿದೆ.
ಕಳೆದ ಹತ್ತು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಎನ್ಸಿಪಿ ನೇತೃತ್ವದ ಸರ್ಕಾರ ಪ್ರಮುಖ ಅಭಿವೃದ್ಧಿ ಕಾರ್ಯ ಮತ್ತು ಮೂಲಸೌಕರ್ಯ ಕಲ್ಪಿಸದೇ ಇರುವುದು ಅದರ ಅಸಾಮರ್ಥ್ಯವನ್ನು ಎತ್ತಿ ತೋರಿಸುತ್ತದೆ ಎಂಬುದನ್ನು 2008, ನವೆಂಬರ್ 26ರಂದು ಮುಂಬೈ ದಾಳಿ ಮೊದಲ ವರ್ಷಾಚರಣೆ ಸಂದರ್ಭದಲ್ಲಿ ಇಲ್ಲಿನ ಅಮೆರಿಕ ರಾಜತಾಂತ್ರಿಕ ಕಚೇರಿ ಬರೆದಿದ್ದ ಪತ್ರವನ್ನು ವಿಕಿಲೀಕ್ಸ್ ಉಲ್ಲೇಖಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.