ADVERTISEMENT

ರಾಷ್ಟ್ರಕ್ಕಾಗಿ ಕೈಜೋಡಿಸಿ ಸಿರಿಸೇನಾ ಮನವಿ

ಪಿಟಿಐ
Published 14 ಏಪ್ರಿಲ್ 2018, 20:37 IST
Last Updated 14 ಏಪ್ರಿಲ್ 2018, 20:37 IST

ಕೊಲೊಂಬೊ: ರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ತಲೆದೋರಿರುವ ಬೆನ್ನಲ್ಲೇ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು, ದೇಶದ ಉತ್ತಮ ಭವಿಷ್ಯಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳು ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ.

‘ಮೇ 8ರವರೆಗೆ ಸಂಸತ್‌ ಅಧಿವೇಶನ ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟಿರುವುದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ದೇಶಕ್ಕೆ ಉತ್ತಮ ಭವಿಷ್ಯ ರೂಪಿಸಲು ಮತ್ತು ಸರ್ಕಾರದ ಕೆಲಸಗಳನ್ನು ಮುಂದುವರಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ಇದಕ್ಕಾಗಿ ಸಂಸತ್‌ನಲ್ಲಿ ಎಲ್ಲ ಪಕ್ಷಗಳ ಬೆಂಬಲ ನಿರೀಕ್ಷಿಸುತ್ತೇನೆ’ ಎಂದು ತಿಳಿಸಿದ್ದಾರೆ.

‘ಸದ್ಯ ಸಂಸತ್‌ನಲ್ಲಿ ಉಂಟಾಗಿರುವ ಸಂಘರ್ಷ ಕೊನೆಗಾಣಿಸಲು ನಿರ್ಧರಿಸಿದ್ದೇನೆ. ಹೊಸ ಅಧಿವೇಶನದಲ್ಲಿ ಸರ್ಕಾರದ ಹೊಸ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಈಗ ಕಾಲ ಕೂಡಿ ಬಂದಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.