ADVERTISEMENT

ಶ್ರೀದೇವಿ ಪಾರ್ಥಿವ ಶರೀರ ಹಸ್ತಾಂತರಕ್ಕೆ ನಿರಾಕ್ಷೇಪಣಾ ಪತ್ರ ನೀಡಿದ ದುಬೈ ಸರ್ಕಾರ

ಏಜೆನ್ಸೀಸ್
Published 27 ಫೆಬ್ರುವರಿ 2018, 9:58 IST
Last Updated 27 ಫೆಬ್ರುವರಿ 2018, 9:58 IST
ಶ್ರೀದೇವಿ ಪಾರ್ಥಿವ ಶರೀರ ಹಸ್ತಾಂತರಕ್ಕೆ ನಿರಾಕ್ಷೇಪಣಾ ಪತ್ರ ನೀಡಿದ ದುಬೈ ಸರ್ಕಾರ
ಶ್ರೀದೇವಿ ಪಾರ್ಥಿವ ಶರೀರ ಹಸ್ತಾಂತರಕ್ಕೆ ನಿರಾಕ್ಷೇಪಣಾ ಪತ್ರ ನೀಡಿದ ದುಬೈ ಸರ್ಕಾರ   

ದುಬೈ: ದುಬೈನಲ್ಲಿ ತಾವು ತಂಗಿದ್ದ ಹೋಟೆಲ್‌ನಲ್ಲಿಯೇ ಶನಿವಾರ ರಾತ್ರಿ ಮೃತರಾದ ಬಹುಭಾಷಾ ನಟಿ ಶ್ರೀದೇವಿ (54) ಅವರ ಪಾರ್ಥಿವ ಶರೀರವನ್ನು ಹಸ್ತಾಂತರಿಸಿ, ಭಾರತಕ್ಕೆ ಕೊಂಡೊಯ್ಯಲು ಬೇಕಿದ್ದ ಅನುಮತಿ ಪತ್ರಗಳನ್ನು ದುಬೈ ಪೊಲೀಸರು ಮಂಗಳವಾರ ನೀಡಿದ್ದಾರೆ.

ಶ್ರೀದೇವಿ ಅವರ ಮೃತ ದೇಹವನ್ನು ನೀಡಲು ದುಬೈ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಮೃತ ದೇಹ ಹಸ್ತಾಂತರಿಸುವ ಸಂಬಂಧ ಅಗತ್ಯವಿದ್ದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ದುಬೈನಲ್ಲಿನ ಭಾರತದ ರಾಯಭಾರ ಕಚೇರಿ ಅಧಿಕಾರಿ ಹಾಗೂ ಕುಟುಂಬಸ್ಥರಿಗೆ ಸ್ಥಳೀಯ ಕಾಲಮಾನ 12.45ಕ್ಕೆ ನೀಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿದ್ದಾಗಿ ‘ಗಲ್ಫ್‌ ನ್ಯೂಸ್‌’ ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT